July 23, 2026
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya
error: Content is protected !!