25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!