25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya
error: Content is protected !!