23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ನಾವೂರು : ಕಳೆದ 24 ವರ್ಷಗಳ ಹಿಂದೆ ನವೋದಯ ಯುವಕ ಮಂಡಲದ ಸದಸ್ಯರುಗಳ ಧಾರ್ಮಿಕ ಚಿಂತನೆಯೊಂದಿಗೆ ನಾವೂರು ಸರಕಾರಿ ಶಾಲೆಯಲ್ಲಿ ಪ್ರಾರಂಭಗೊಂಡಿದೆ.
ಪ್ರಸ್ತುತ ವರ್ಷದ ಕಾರ್ಯಕ್ರಮವು ಅ. 20ರ ಶುಕ್ರವಾರ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ ಶಾರದಾ ಪೂಜೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಅ.8 ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೌರವ ಸಲಹೆಗಾರರು, ಮಾರ್ಗದರ್ಶರಾದ ಡಾ. ಪ್ರದೀಪ್ ಆಟಿಕುಕ್ಕೆ ಬಿಡುಗಡೆ ಮಾಡಿ ಶುಭಹಾರೈಸಿದರು.


25ನೇ ವರ್ಷದ ಅಂಗವಾಗಿ ಡ್ಯಾಝಲ್ ಸ್ಟುಡಿಯೋ ಮೂಲ್ಕಿ ಅರ್ಪಿಸುವ ಮಯೋಡ್ ಮೆರೆಯಿನ ಸತ್ಯೋಲ್ನ ಕಥೆ “ಕಾರ್ಣಿಕದ ಗತ ವೈಭವ” ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಾಗ್ಮಿ, ಧಾರ್ಮಿಕ ಚಿಂತಕಿ ಅಕ್ಷಯ ಗೋಖಲೆ ಕಾರ್ಕಳ, ಇವರು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕಾರಿಂಜ, ಉಪಾಧ್ಯಕ್ಷರಾದ ಪ್ರಮೋದ್ ಸಾಲ್ಯಾನ್ ಮೋರ್ತಾಜೆ, ಕಾರ್ಯದರ್ಶಿ ಬಾಲಕೃಷ್ಣ, ಸದಸ್ಯರುಗಳಾದ ಪ್ರದೀಪ್ ಗೌಡ ನಾಗಜೆ, ಕೃಷ್ಣಪ್ಪ ಪೂಜಾರಿ ಬೊಂತ್ರಪಾಲು, ಉದಯ ಬಂಗೇರ ಬೋಲೋಟ್ಟು, ಮೋಹನ ತಿಮರಡ್ಡ, ನವೀನ್ ಪೂಜಾರಿ, ವಸಂತ ಗೌಡ, ಶ್ರೀಮತಿ ಸುಮಾ ಕಿರ್ನಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya
error: Content is protected !!