March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖತೀಬರಾದ ಬಶೀರ್ ಸಅದಿ ಉಸ್ತಾದ್ ರವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಮತ್ತು ದುಆ ನಡೆಯಿತು. ನಿರ್ಗಮನ ಕಾರ್ಯದರ್ಶಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ ಸ್ವಾಗತಿಸಿದರು. ಅಯ್ಯೂಬ್ ಸಅದಿ ಉದ್ಘಾಟಿಸಿದರು. ಅಬ್ದುರ್ರಝಾಕ್ ನಾವೂರು ವರದಿ ವಾಚಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ ರಝಾಕ್ ನಾವೂರು, ಅಧ್ಯಕ್ಷರಾಗಿ ಅಯ್ಯೂಬ್ ಸಅದಿ ಕೋಡಿಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಮುರ, ಉಪಾಧ್ಯಕ್ಷರುಗಳಾಗಿ ಇಸ್ಮಾಯಿಲ್ ಕಿರ್ನಡ್ಕ ಹಾಗೂ ಉಸ್ಮಾನ್ ಅಲ್ಲಾಜೆ, ಜೂತೆ ಕಾರ್ಯದರ್ಶಿಗಳಾಗಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ, ಉಮೈರ್, ಕೋಶಾಧಿಕಾರಿಯಾಗಿ ಹಮೀದ್ ಎನ್.ಎಚ್ ಸಹಿತ 25 ಸದಸ್ಯರನ್ನು ಆರಿಸಲಾಯಿತು. 7 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದ ಶಮೀಮ್ ಪಾರ್ನಡ್ಕ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸ್ವಲಾತ್‌ನೊಂದಿಗೆ ಕಾರ್ಯಕ್ರಮ ಮುಗಿಸಿ ತಬರ್ರುಕ್ ವಿತರಿಸಲಾಯಿತು.

Related posts

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya
error: Content is protected !!