September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖತೀಬರಾದ ಬಶೀರ್ ಸಅದಿ ಉಸ್ತಾದ್ ರವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಮತ್ತು ದುಆ ನಡೆಯಿತು. ನಿರ್ಗಮನ ಕಾರ್ಯದರ್ಶಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ ಸ್ವಾಗತಿಸಿದರು. ಅಯ್ಯೂಬ್ ಸಅದಿ ಉದ್ಘಾಟಿಸಿದರು. ಅಬ್ದುರ್ರಝಾಕ್ ನಾವೂರು ವರದಿ ವಾಚಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ ರಝಾಕ್ ನಾವೂರು, ಅಧ್ಯಕ್ಷರಾಗಿ ಅಯ್ಯೂಬ್ ಸಅದಿ ಕೋಡಿಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಮುರ, ಉಪಾಧ್ಯಕ್ಷರುಗಳಾಗಿ ಇಸ್ಮಾಯಿಲ್ ಕಿರ್ನಡ್ಕ ಹಾಗೂ ಉಸ್ಮಾನ್ ಅಲ್ಲಾಜೆ, ಜೂತೆ ಕಾರ್ಯದರ್ಶಿಗಳಾಗಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ, ಉಮೈರ್, ಕೋಶಾಧಿಕಾರಿಯಾಗಿ ಹಮೀದ್ ಎನ್.ಎಚ್ ಸಹಿತ 25 ಸದಸ್ಯರನ್ನು ಆರಿಸಲಾಯಿತು. 7 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದ ಶಮೀಮ್ ಪಾರ್ನಡ್ಕ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸ್ವಲಾತ್‌ನೊಂದಿಗೆ ಕಾರ್ಯಕ್ರಮ ಮುಗಿಸಿ ತಬರ್ರುಕ್ ವಿತರಿಸಲಾಯಿತು.

Related posts

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!