23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖತೀಬರಾದ ಬಶೀರ್ ಸಅದಿ ಉಸ್ತಾದ್ ರವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಮತ್ತು ದುಆ ನಡೆಯಿತು. ನಿರ್ಗಮನ ಕಾರ್ಯದರ್ಶಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ ಸ್ವಾಗತಿಸಿದರು. ಅಯ್ಯೂಬ್ ಸಅದಿ ಉದ್ಘಾಟಿಸಿದರು. ಅಬ್ದುರ್ರಝಾಕ್ ನಾವೂರು ವರದಿ ವಾಚಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ ರಝಾಕ್ ನಾವೂರು, ಅಧ್ಯಕ್ಷರಾಗಿ ಅಯ್ಯೂಬ್ ಸಅದಿ ಕೋಡಿಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಮುರ, ಉಪಾಧ್ಯಕ್ಷರುಗಳಾಗಿ ಇಸ್ಮಾಯಿಲ್ ಕಿರ್ನಡ್ಕ ಹಾಗೂ ಉಸ್ಮಾನ್ ಅಲ್ಲಾಜೆ, ಜೂತೆ ಕಾರ್ಯದರ್ಶಿಗಳಾಗಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ, ಉಮೈರ್, ಕೋಶಾಧಿಕಾರಿಯಾಗಿ ಹಮೀದ್ ಎನ್.ಎಚ್ ಸಹಿತ 25 ಸದಸ್ಯರನ್ನು ಆರಿಸಲಾಯಿತು. 7 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದ ಶಮೀಮ್ ಪಾರ್ನಡ್ಕ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸ್ವಲಾತ್‌ನೊಂದಿಗೆ ಕಾರ್ಯಕ್ರಮ ಮುಗಿಸಿ ತಬರ್ರುಕ್ ವಿತರಿಸಲಾಯಿತು.

Related posts

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!