23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖತೀಬರಾದ ಬಶೀರ್ ಸಅದಿ ಉಸ್ತಾದ್ ರವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಮತ್ತು ದುಆ ನಡೆಯಿತು. ನಿರ್ಗಮನ ಕಾರ್ಯದರ್ಶಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ ಸ್ವಾಗತಿಸಿದರು. ಅಯ್ಯೂಬ್ ಸಅದಿ ಉದ್ಘಾಟಿಸಿದರು. ಅಬ್ದುರ್ರಝಾಕ್ ನಾವೂರು ವರದಿ ವಾಚಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ ರಝಾಕ್ ನಾವೂರು, ಅಧ್ಯಕ್ಷರಾಗಿ ಅಯ್ಯೂಬ್ ಸಅದಿ ಕೋಡಿಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಮುರ, ಉಪಾಧ್ಯಕ್ಷರುಗಳಾಗಿ ಇಸ್ಮಾಯಿಲ್ ಕಿರ್ನಡ್ಕ ಹಾಗೂ ಉಸ್ಮಾನ್ ಅಲ್ಲಾಜೆ, ಜೂತೆ ಕಾರ್ಯದರ್ಶಿಗಳಾಗಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ, ಉಮೈರ್, ಕೋಶಾಧಿಕಾರಿಯಾಗಿ ಹಮೀದ್ ಎನ್.ಎಚ್ ಸಹಿತ 25 ಸದಸ್ಯರನ್ನು ಆರಿಸಲಾಯಿತು. 7 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದ ಶಮೀಮ್ ಪಾರ್ನಡ್ಕ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸ್ವಲಾತ್‌ನೊಂದಿಗೆ ಕಾರ್ಯಕ್ರಮ ಮುಗಿಸಿ ತಬರ್ರುಕ್ ವಿತರಿಸಲಾಯಿತು.

Related posts

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya
error: Content is protected !!