23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಅ. 7 ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯ ನೇತೃತ್ವದಲ್ಲಿ ಗೇರುಕಟ್ಟೆಯ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದಲ್ಲಿ ನಿಖಿಲ್ ದೇವಾಡಿಗ 100 ಮೀಟರ್ ಮತ್ತು ಎತ್ತರ ಜಿಗಿತ ಪ್ರಥಮ ಹಾಗೂ 200 ಮೀಟರ್ ದ್ವಿತೀಯ, ದಿಯಾ ಚಂದನ ಎತ್ತರ ಜಿಗಿತ ಪ್ರಥಮ ಮತ್ತು ಈಟಿ ಎಸೆತ ದ್ವಿತೀಯ, ಅಂಕಿತ ಜೆ ಎನ್ ಚಕ್ರ ಎಸೆತ ಪ್ರಥಮ, ಸಂಜನಾ ಎ ಗುಂಡು ಎಸೆತ ಪ್ರಥಮ, ಹಿತೇಶ್ ಎತ್ತರ ಜಿಗಿತ ದ್ವಿತೀಯ, ಪ್ರತೀಕ್ಷಾ 400 ಮೀಟರ್ ದ್ವಿತೀಯ, ಚೇತನ ರೂಪ ಚಕ್ರಎಸೆತ ದ್ವಿತೀಯ, ಧೀರಜ್ ತ್ರಿವಿಧ ಜಿಗಿತ ದ್ವಿತೀಯ ಮತ್ತು 100 ಮೀಟರ್ ತೃತೀಯ, ಯಶ್ವಿನ್ ಉದ್ದ ಜಿಗಿತ ಪ್ರಥಮ ಹಾಗೂ ತ್ರಿವಿಧ ಜಿಗಿತ ತ್ರತೀಯ, ಸನ್ನಿಧಿ ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತ ಪ್ರಥಮ, ಸಲ್ಮಾ ಶಹನಾಝ್ – ಈಟಿ ಎಸತ- ಪ್ರಥಮ, ಶರಣ್ಯ ತ್ರಿವಿಧ ಜಿಗಿತ ದ್ವಿತೀಯ, 4×100 ಮೀಟರ್ ರಿಲೇ ಬಾಲಕರ ತಂಡ ದ್ವಿತೀಯ ಹಾಗೂ ಬಾಲಿಕೆಯರ ತಂಡ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಒಟ್ಟು 10 ಪ್ರಥಮ ಸ್ಥಾನ, 5 ದ್ವಿತೀಯ, 5 ತೃತೀಯ ಸ್ಥಾನ ಹೀಗೆ ಒಟ್ಟು 20 ಪದಕಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಈ ಹಿಂದಿನ ದೈಹಿಕ ಶಿಕ್ಷಕರಾಗಿದ್ದ ಸತ್ಯಕಿರಣ್ ಕುಮಾರ್ ಉಡುಪಿ, ಪ್ರಸ್ತುತ ದೈಹಿಕ ಶಿಕ್ಷಕ ಆಗಿರುವ ಮೋಹನಂದ, ಹಾಗೂ ತರಬೇತುದಾರ ಸ್ನೇಹಿತ ರಾಜೇಶ್ ಇವರಿಗೆ ಹಾಗೂ ಶಿಕ್ಷಕ ಬಳಗಕ್ಕೆ ಉಪ ಪ್ರಾಂಶುಪಾಲರಾದ ಉದಯ್ ಕುಮಾರ್ ಬಿ ಇವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ಈ ಸಂದರ್ಭದಲ್ಲಿ ಗೇರುಕಟ್ಟೆ ಪ್ರೌಢಶಾಲಾ ಉಪ ಪ್ರಾಂಶುಪಾಲರಾದ ಶ್ರೀಮತಿ ಈಶ್ವರಿ , ದೈಹಿಕ ಶಿಕ್ಷಕರಾದ ಅಜಿತ್ ಕುಮಾರ್ ಕೆ, ಇದೇ ಸಂಸ್ಥೆಯ ಸಹ ಶಿಕ್ಷಕರಾದ ರಾಜೇಂದ್ರಕೃಷ್ಣ, ದಿನೇಶ್, ಹಾಗೂ ಮಮತಾ, ಆಶಾಲತಾ, ರಮ್ಯಾ, ಜ್ಯೋತಿ ಮತ್ತು ಸವಣಾಲು ಪ್ರೌಢಶಾಲೆಯ ಸಹ ಶಿಕ್ಷಕ ಸತೀಶ್ ಬಂಗೇರ , ಕೆಪಿಎಸ್ ಪುಂಜಾಲಕಟ್ಟೆಯ ಪ್ರೌಢಶಾಲಾ ಶಿಕ್ಷಕರಾದ ಧರಣೇಂದ್ರ ಕೆ, ಜಯಂತಿ ಹಾಗೂ ತರಬೇತುದಾರ ರಾಜೇಶ್ ಉಪಸ್ಥಿತರಿದ್ದರು.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya
error: Content is protected !!