38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಮರು ನಿರ್ಮಿಸಿದ ಘಟನೆಯ ಬೆನ್ನಲ್ಲೆ ಅ.9ರಂದು ಅರಣ್ಯ ಇಲಾಖೆಯವರು ಮನೆ ತೆರವಿಗೆ ಸಚಿವರ ಆದೇಶ ಇದೆ ಎಂದು ಹೇಳಿ ಮತ್ತೆ ಮನೆ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಜಿಲ್ಲೆಯ ಬಿಜೆಪಿ ಶಾಸಕರುಗಳು ಸ್ಥಳಕ್ಕೆ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದು, ನಾಗರಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಮನೆಯನ್ನು ತೆರವುಗೊಳಿಸುವ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದೆ. ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಸಂಧರ್ಭದಲ್ಲಿ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ಬಂಟ್ವಾಳ , ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಕುಮಾರ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರಿಗೆ, ಪಕ್ಷದ ಪದಾಧಿಕಾರಿಗಳು, ಗ್ರಾ .ಪಂ ಅಧ್ಯಕ್ಷರು , ಸದಸ್ಯರು, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya
error: Content is protected !!