July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

ನಾವೂರು: ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮುರ – ನಾವೂರು ಇದರ ಮಹಾ ಸಭೆಯು ಮುರ ಮುಹಿಯುದ್ಧೀನ್ ಜುಮಾ ಮಸ್ಜಿದ್‌ನಲ್ಲಿ ಅ. 8 ರಂದು ರಾತ್ರಿ ಜಮಾತ್ ಅಧ್ಯಕ್ಷರಾದ ಎನ್. ಕೆ. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖತೀಬರಾದ ಬಶೀರ್ ಸಅದಿ ಉಸ್ತಾದ್ ರವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ಮತ್ತು ದುಆ ನಡೆಯಿತು. ನಿರ್ಗಮನ ಕಾರ್ಯದರ್ಶಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ ಸ್ವಾಗತಿಸಿದರು. ಅಯ್ಯೂಬ್ ಸಅದಿ ಉದ್ಘಾಟಿಸಿದರು. ಅಬ್ದುರ್ರಝಾಕ್ ನಾವೂರು ವರದಿ ವಾಚಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ ರಝಾಕ್ ನಾವೂರು, ಅಧ್ಯಕ್ಷರಾಗಿ ಅಯ್ಯೂಬ್ ಸಅದಿ ಕೋಡಿಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಂ ಮುರ, ಉಪಾಧ್ಯಕ್ಷರುಗಳಾಗಿ ಇಸ್ಮಾಯಿಲ್ ಕಿರ್ನಡ್ಕ ಹಾಗೂ ಉಸ್ಮಾನ್ ಅಲ್ಲಾಜೆ, ಜೂತೆ ಕಾರ್ಯದರ್ಶಿಗಳಾಗಿ ಶಮೀಮ್ ಮೊಹಿದ್ದೀನ್ ಪಾರ್ನಡ್ಕ, ಉಮೈರ್, ಕೋಶಾಧಿಕಾರಿಯಾಗಿ ಹಮೀದ್ ಎನ್.ಎಚ್ ಸಹಿತ 25 ಸದಸ್ಯರನ್ನು ಆರಿಸಲಾಯಿತು. 7 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾದ ಶಮೀಮ್ ಪಾರ್ನಡ್ಕ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸ್ವಲಾತ್‌ನೊಂದಿಗೆ ಕಾರ್ಯಕ್ರಮ ಮುಗಿಸಿ ತಬರ್ರುಕ್ ವಿತರಿಸಲಾಯಿತು.

Related posts

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya
error: Content is protected !!