25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

ಪೆರಿಂಜೆ : ಹೊಸಂಗಡಿ ಮಂಡಲ ಪಂಚಾಯತ್ ಪ್ರಥಮ ಮಂಡಲ ಪ್ರಧಾನ ದಿವಂಗತ ಎ. ಗುಣಪಾಲ್ ಜೈನ್ ಎರ್ಮೋಡಿ ಇವರ ಸ್ಮರಣಾರ್ಥ ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ ಮಾಡಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅ.8ರಂದು ಅನಾವರಣಗೊಳಿಸಿದರು.

ದಿವಂಗತ ಗುಣಪಾಲ್ ಜೈನ್ ರವರು ಹೊಸಂಗಡಿ ಗ್ರಾಮ ಪಂಚಾಯತ್ ನ ಮೊದಲ ಮಂಡಲ ಪ್ರಧಾನರಾಗಿ ಸರ್ವತೋಮುಖ ಅಭಿವೃದ್ಧಿಯಲ್ಲಿ ತನ್ನನು ತಾನು ತೊಡಗಿಸಿಕೊಂಡವರು. ಜಾತಿ ಮತ ಭೇದವಿಲ್ಲದೆ ಎಲ್ಲರೊಂದಿಗೆ ಬೆರತು ಸೇವೆ ಮಾಡಿದವರು ಮತ್ತು ಕೊಡುಗೈ ದಾನಿಯಾಗಿದ್ದರು. ಯುವಕರ ತಂಡಗಳನ್ನು ಕಟ್ಟಿ ಶ್ರಮದಾನದ ಮೂಲಕ ಶಾಲೆಗಳ ಆಟದ ಮೈದಾನಗಳನ್ನು ಅಭಿವೃದ್ಧಿ ಪಡಿಸಿದವರು.

ಪಡ್ಡಂದಡ್ಕ ಭಜನಾ ಮಂಡಲ ಮಹಿಳಾ ಮಂಡಲ,ಯುವಕ ಮಂಡಲ, ಪಡ್ಡಂದಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪಿಪಕ ಸದಸ್ಯರು, ಬಡಕೋಡಿ ಗ್ರಾಮದ ಶಾಲೆ ಮತ್ತು ಪೆರಿಂಜೆ ಶಾಲೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು.

ವೇಣೂರು ಭಗವಾನ್ ಬಾಹುಬಲಿ ಗೆ ಮಹಾಮಸ್ತಕಾಭಿಷೇಕದ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ದುಡಿದವರು.ಅವರ ಆದರ್ಶವನ್ನು ಅಮರವಾಗಿಡಲು ಇಂದು ರಸ್ತೆಗೆ ಹೆಸರನ್ನಿಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಎ. ಜೀವಂಧರ್ ಕುಮಾರ್ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಪಡ್ಯಾರಬೆಟ್ಟ, ಉದ್ಯಮಿ ವಿಕಾಸ್ ಜೈನ್, ದಿವಂಗತ ಗುಣಪಾಲ್ ಜೈನ್ ರವರ ಮಿತ್ರ ಶಂಕರ್ ಭಟ್ ಬಾಲ್ಯ ದಕ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್,ನೂರುಲ್ ಹುಧಾ ಜುಮ್ಮಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಕೆ, ಆನಂದ ಕೋಟ್ಯಾನ್, ಮಹಮ್ಮದ್ ಎಚ್ ವೇಣೂರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ, ಹೇಮಾ ವಸಂತ್, ಲತಾ ಪೆರಿಂಜೆ, ಅಲಿಯಬ್ಬ ಬಲ್ಲಂಗೇರಿ, ಖಾಲಿದ್ ಪುಲಬೆ,ದಿವಂಗತರ ಧರ್ಮ ಪತ್ನಿ ಸರೋಜಾ ಜೈನ್, ಮಗಳು ಡಾ ಪ್ರಣಮ್ಯ ಜೈನ್, ಅಳಿಯ ಡಾ ಮಹಾವೀರ ಜೈನ್ , ಶರ್ಮಿತ್ ಕುಮಾರ್ ಎರ್ಮೋಡಿ, ಮತ್ತು ದಿವಂಗತರ ಕುಟುಂಬಸ್ಥರು ಉಪಸ್ಥಿತರಿದ್ದರು.

ವಿದ್ಯಾನಂದ ಕುಮಾರ್ ಜೈನ್ ಎರ್ಮೋಡಿ ವಂದಿಸಿದರು.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!