27 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!