26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
error: Content is protected !!