23.9 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಪ್ರತಿಷ್ಠಿತ ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಮತ್ತೊಂದು ಉನ್ನತವಾದ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ,ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಇದರ ಸಹಯೋಗದಲ್ಲಿ ಇಂಪನ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಬಳಂಜ ಗ್ರಾಮ ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳು, ಜನಪ್ರತಿನಿಧಿಗಳು, ಬಳಂಜ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅ.ಅಧಿಕಾರಿ ಶ್ರೀನಿವಾಸ್, ಉಪಾಧ್ಯಕ್ಷ ಯಶೋಧರ ಶೆಟ್ಟಿ, ಸದಸ್ಯರಾದ ಹೇಮಂತ್, ಬೇಬಿ ನಾರಾಯಣ, ಪದ್ಮಾವತಿ, ಯಕ್ಷಿತಾ ದೇವಾಡಿಗ, ಸುಚಿತ್ರಾ, ಪ್ರಸನ್ನ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ ಅರ್ಹವಾಗಿ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

Related posts

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
error: Content is protected !!