25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!