24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!