28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಪ್ರತಿಷ್ಠಿತ ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಮತ್ತೊಂದು ಉನ್ನತವಾದ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ,ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಇದರ ಸಹಯೋಗದಲ್ಲಿ ಇಂಪನ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಬಳಂಜ ಗ್ರಾಮ ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳು, ಜನಪ್ರತಿನಿಧಿಗಳು, ಬಳಂಜ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅ.ಅಧಿಕಾರಿ ಶ್ರೀನಿವಾಸ್, ಉಪಾಧ್ಯಕ್ಷ ಯಶೋಧರ ಶೆಟ್ಟಿ, ಸದಸ್ಯರಾದ ಹೇಮಂತ್, ಬೇಬಿ ನಾರಾಯಣ, ಪದ್ಮಾವತಿ, ಯಕ್ಷಿತಾ ದೇವಾಡಿಗ, ಸುಚಿತ್ರಾ, ಪ್ರಸನ್ನ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ ಅರ್ಹವಾಗಿ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya
error: Content is protected !!