28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!