24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya
error: Content is protected !!