ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಿತು.


ಸಂಘದ ಮಾಜಿ ಅಧ್ಯಕ್ಷ ದಿವಾಕರ ಭಂಡಾರಿ ನಾರಾವಿ, ಶ್ರೀಮತಿ ಸೀತಾ ತೌಡ ಭಂಡಾರಿ, ಉದ್ಯಮಿ ಭಾಸ್ಕರ್ ಪೈ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ, ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ, ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಉಪಸ್ಥಿತರಿದ್ದರು.


ಪ್ರತಿಭಾ ಸುನೀಲ್ ಭಂಡಾರಿ ಪ್ರಾರ್ಥಿಸಿದರು. ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಸ್ವಾಗತಿಸಿದರು. ದಯಾನಂದ ಭಂಡಾರಿ ವಂದಿಸಿದರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು

Leave a Comment

error: Content is protected !!