24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

ಕಳೆಂಜ: ಇಲ್ಲಿಯ ಅಮ್ಮಿನಡ್ಕ ಎಂಬಲ್ಲಿ ಅರಣ್ಯ ಇಲಾಖೆಯವರು ಲೋಲಾಕ್ಷ ಎಂಬವರ ನೂತನ ಮನೆ ನಿಮಾರ್ಣದ ಪಂಚಾಂಗ ಕೆಡವಿ ಹಾಕಿರುವ ಪ್ರಕರಣದಲ್ಲಿ ಅವರ ಪತ್ನಿ ಶ್ರೀಮತಿ ರಕ್ಷಿತಾ ಅವರು ಧರ್ಮಸ್ಥಳ ಪೊಲೀಸರಿಗೆ ಅ.6 ರಂದು ನೀಡಿರುವ ದೂರಿನ ಆಧಾರದಲ್ಲಿ ಕಳೆಂಜ ವಲಯದ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಯವರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಕ್ಷಿತಾರವರು ಠಾಣೆಗೆ ನೀಡಿರುವ ದೂರಿನಲ್ಲಿ ನಾವು ಹೊಸ ಮನೆ ನಿರ್ಮಿಸಲು ಕೂಲಿ ಕೆಲಸದವರೊಂದಿಗೆ ಪಂಚಾಂಗವನ್ನು ಕಟ್ಟುತ್ತಿರುವ ಸಮಯ ಕಳೆಂಜ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮತ್ತು ಸಿಬ್ಬಂದಿಯವರು ಮನೆಯವರನ್ನು ದೂಡಿ ಹಾಕಿ ಅವಾಚ್ಯ ಶಬ್ಧಗಳಿಂದ ಬೈದು ಮಾನಭಂಗಕ್ಕೆ ಯತ್ನಿಸಿದರಲ್ಲದೆ, ಇನ್ನು ಮುಂದಕ್ಕೆ ಬೇರೆ ಮನೆ ಕಟ್ಟಿದರೆ ಮನೆಗೆ ಬೆಂಕಿ ಕೊಟ್ಟು ದ್ವಂಸಗೊಳಿಸುತ್ತೇವೆ ಎಂದು ಬೆದರಿಕೆಯನ್ನು ಹಾಕಿರುವುದಾಗಿ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!