24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya
error: Content is protected !!