25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya
error: Content is protected !!