26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.
ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ ಮನೆಗೆ ಸಿಡಿಲು ಬಡಿದು ಸ್ವಿಚ್ ಬೋರ್ಡ್‌ಗಳಿಗೆ ಹಾನಿಯಾಗಿದೆ . ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಪಾರ್ಕಿಂಗ್ ನ ಪಿಲ್ಲರ್ ಕಂಬದ ಬುಡ ಸಿಡಿಲಾಘಾತಕ್ಕೆ ಸಿಮೆಂಟ್ ಸಮೇತ ಕಿತ್ತು ಬಂದಿದ್ದು ಬಾವಿಯ ಕಟ್ಟೆಗೂ ಹಾನಿಯಾಗಿದೆ. ನೀರಿನ ಪಂಪಿನ ಕವರ್ ಛಿದ್ರಗೊಂಡಿದ್ದು ಮನೆಯ ಇನ್ವರ್ಟರ್, ಫ್ಯಾನ್‌ಗಳು, ಬಲ್ಬುಗಳು ಸಂಪೂರ್ಣ ಕೆಟ್ಟು ಹೋಗಿದೆ. ಮನೆಯ ಆವರಣ ಗೋಡೆಯು ಕುಸಿತಗೊಂಡಿದೆ.

ಸುರೇಶ್ ಗೌಡ ಅವರು ಉಜಿರೆ ಎಸ್‌ಡಿಎಂ ಡಿಪ್ಲೋಮಾ ಕಾಲೇಜಿನ ಸಿಬ್ಬಂದಿ, ಅವರ ಪತ್ನಿ‌ ಭಾರತಿ ಅವರು ನಡ ಪಂಚಾಯತ್ ನಲ್ಲಿ ಗುಮಾಸ್ತೆಯಾಗಿದ್ದು ಇಬ್ಬರೂ ಕರ್ತವ್ಯಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಹೆಚ್ಚಿನ‌ ಅನಾಹುತ ತಪ್ಪಿದೆ.

Related posts

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
error: Content is protected !!