September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ.


ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ ಸುಧಾಕರ್ ವಹಿಸಲಿದ್ದಾರೆ.
ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿವರು.


ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್‌ಸಿಂಹ ನಾಯಕ್, ಎಸ್.ಎಲ್ ಭೋಜೆ ಗೌಡ, ಡಾ| ಮಂಜುನಾಥ್ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆಂದು ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya
error: Content is protected !!