ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಕಾಲೇಜ್ ಮೈದಾನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಜೈನ್ ಅಮೃತ್ ಟೆಕ್ಸ್ಟೈಲ್ಸ್ ಉಜಿರೆ ಮತ್ತು ಶ್ರೀ ಸೋಮಶೇಖರ ಶೆಟ್ಟಿ ವಿಧ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಎಸ್ ಡಿ ಎಂ ಎಜುಕೇಶನಲ್ ಸೊಸೈಟಿ ಉಜಿರೆ ಉಪಸ್ಥಿತರಿದ್ದರು.

ಎಸ್ ಡಿ ಎಂ ವಾಲಿಬಾಲ್ ಕೋಚ್ ಮತ್ತು ದೈಹಿಕ ನಿರ್ದೇಶಕ ಸುದಿನ , ಕಾಲೇಜ್ ವ್ಯವಸ್ಥಾಪಕ ಚಂದ್ರನಾಥ್ ಜೈನ್, ದೈಹಿಕ ನಿರ್ದೇಶಕ ನಿತಿನ್ ಪೂಜಾರಿ ಉಪಸ್ಥಿತರಿದ್ದರು. ಪ್ರಥಮ ಸ್ಥಾನವನ್ನು ಎನ್ ಆರ್ ಎ ಎಮ್ ಪಾಲಿಟೆಕ್ನಿಕ್ ನಿಟ್ಟೆ ಮತ್ತು ದ್ವಿತೀಯ ಸ್ಥಾನವನ್ನು ಎಸ್ ಎನ್ ಎಸ್ ಪಾಲಿಟೆಕ್ನಿಕ್ ಸುಂಕದಕಟ್ಟೆ ಪಡೆದುಕೊಂಡಿತು.

Leave a Comment

error: Content is protected !!