29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ