September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!