26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya
error: Content is protected !!