March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

ಕೊಯ್ಯೂರು: ಕೊಯ್ಯೂರು ಗ್ರಾಮದ ಆದೂರು ಪೇರಾಲ್ ನಲ್ಲಿ ಸುಮಾರು 38 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ರವರು ಇತ್ತೀಚೆಗೆ ನಿಧನಹೊಂದಿದರು.

ಇವರು ಕೊಯ್ಯೂರಿನಲ್ಲಿ ಆರಂಭವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿ, ಯುವಕ ಮಂಡಲದ ಅಧ್ಯಕ್ಷರಾಗಿ , ಗೌರವಾಧ್ಯಕ್ಷರಾಗಿ, ಆದೂರು ಪೇರಾಲ್ ಮಹಮ್ಮಾಯಿ ದೈವಸ್ಥಾನದ ಗೌರವಾಧ್ಯಕ್ಷರಾಗಿ, ಊರಿನ ದೇವಸ್ಥಾನ, ದೈವಸ್ಥಾನಗಳಿಗೆ ಸಲಹೆಗಾರರಾಗಿ, ಎಲ್ಲರೊಂದಿಗೂ ಸದಾ ನಗುಮುಖ ದೊಂದಿಗೆ ಸ್ಪಂದಿಸುವ ಒಬ್ಬ ಅಜಾತಶತ್ರುವೆಂದು ಬಿಂಬಿತರಾದವರು. ಇವರು ಪ್ರಗತಿಪರ ಕೃಷಿಕರು, ನಾಟಕ ಯಕ್ಷಗಾನ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು.


ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನ ಸುದ್ದಿ ತಿಳಿದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಮ್ ಹಾಗೂ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು- ಸದಸ್ಯರುಗಳು, ಗಣ್ಯಾದಿ ಗಣ್ಯರುಗಳೊಂದಿಗೆ ಊರಿನ ಜನರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya
error: Content is protected !!