July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

ಕೊಯ್ಯೂರು: ಕೊಯ್ಯೂರು ಗ್ರಾಮದ ಆದೂರು ಪೇರಾಲ್ ನಲ್ಲಿ ಸುಮಾರು 38 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ರವರು ಇತ್ತೀಚೆಗೆ ನಿಧನಹೊಂದಿದರು.

ಇವರು ಕೊಯ್ಯೂರಿನಲ್ಲಿ ಆರಂಭವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿ, ಯುವಕ ಮಂಡಲದ ಅಧ್ಯಕ್ಷರಾಗಿ , ಗೌರವಾಧ್ಯಕ್ಷರಾಗಿ, ಆದೂರು ಪೇರಾಲ್ ಮಹಮ್ಮಾಯಿ ದೈವಸ್ಥಾನದ ಗೌರವಾಧ್ಯಕ್ಷರಾಗಿ, ಊರಿನ ದೇವಸ್ಥಾನ, ದೈವಸ್ಥಾನಗಳಿಗೆ ಸಲಹೆಗಾರರಾಗಿ, ಎಲ್ಲರೊಂದಿಗೂ ಸದಾ ನಗುಮುಖ ದೊಂದಿಗೆ ಸ್ಪಂದಿಸುವ ಒಬ್ಬ ಅಜಾತಶತ್ರುವೆಂದು ಬಿಂಬಿತರಾದವರು. ಇವರು ಪ್ರಗತಿಪರ ಕೃಷಿಕರು, ನಾಟಕ ಯಕ್ಷಗಾನ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು.


ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನ ಸುದ್ದಿ ತಿಳಿದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಮ್ ಹಾಗೂ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು- ಸದಸ್ಯರುಗಳು, ಗಣ್ಯಾದಿ ಗಣ್ಯರುಗಳೊಂದಿಗೆ ಊರಿನ ಜನರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya
error: Content is protected !!