September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ.


ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ ಸುಧಾಕರ್ ವಹಿಸಲಿದ್ದಾರೆ.
ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿವರು.


ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್‌ಸಿಂಹ ನಾಯಕ್, ಎಸ್.ಎಲ್ ಭೋಜೆ ಗೌಡ, ಡಾ| ಮಂಜುನಾಥ್ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆಂದು ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!