22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya
error: Content is protected !!