23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!