23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!