37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಕಾಲೇಜ್ ಮೈದಾನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಜೈನ್ ಅಮೃತ್ ಟೆಕ್ಸ್ಟೈಲ್ಸ್ ಉಜಿರೆ ಮತ್ತು ಶ್ರೀ ಸೋಮಶೇಖರ ಶೆಟ್ಟಿ ವಿಧ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಎಸ್ ಡಿ ಎಂ ಎಜುಕೇಶನಲ್ ಸೊಸೈಟಿ ಉಜಿರೆ ಉಪಸ್ಥಿತರಿದ್ದರು.

ಎಸ್ ಡಿ ಎಂ ವಾಲಿಬಾಲ್ ಕೋಚ್ ಮತ್ತು ದೈಹಿಕ ನಿರ್ದೇಶಕ ಸುದಿನ , ಕಾಲೇಜ್ ವ್ಯವಸ್ಥಾಪಕ ಚಂದ್ರನಾಥ್ ಜೈನ್, ದೈಹಿಕ ನಿರ್ದೇಶಕ ನಿತಿನ್ ಪೂಜಾರಿ ಉಪಸ್ಥಿತರಿದ್ದರು. ಪ್ರಥಮ ಸ್ಥಾನವನ್ನು ಎನ್ ಆರ್ ಎ ಎಮ್ ಪಾಲಿಟೆಕ್ನಿಕ್ ನಿಟ್ಟೆ ಮತ್ತು ದ್ವಿತೀಯ ಸ್ಥಾನವನ್ನು ಎಸ್ ಎನ್ ಎಸ್ ಪಾಲಿಟೆಕ್ನಿಕ್ ಸುಂಕದಕಟ್ಟೆ ಪಡೆದುಕೊಂಡಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya
error: Content is protected !!