37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya
error: Content is protected !!