24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya
error: Content is protected !!