July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!