27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!