24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!