22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!