25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ , ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ನಾಲ್ಕು ಜನ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆಗೆ ಕಾರಿನಲ್ಲಿ ಹೋಗಿದ್ದರು.ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಯುವಕರ ಮಧ್ಯದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದ್ದು ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದರು. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ. ಇನ್ನೂ ಪತ್ತೆಯಾಗಿರುವ ದೀಕ್ಷಿತ್ ಪೂಜಾರಿ ಬಣಕಲ್ ಠಾಣೆಗೆ ಹೋಗಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕಾಗಿದೆ.

Related posts

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!