22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

ಕೊಯ್ಯೂರು: ಕೊಯ್ಯೂರು ಗ್ರಾಮದ ಆದೂರು ಪೇರಾಲ್ ನಲ್ಲಿ ಸುಮಾರು 38 ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ರವರು ಇತ್ತೀಚೆಗೆ ನಿಧನಹೊಂದಿದರು.

ಇವರು ಕೊಯ್ಯೂರಿನಲ್ಲಿ ಆರಂಭವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿ, ಯುವಕ ಮಂಡಲದ ಅಧ್ಯಕ್ಷರಾಗಿ , ಗೌರವಾಧ್ಯಕ್ಷರಾಗಿ, ಆದೂರು ಪೇರಾಲ್ ಮಹಮ್ಮಾಯಿ ದೈವಸ್ಥಾನದ ಗೌರವಾಧ್ಯಕ್ಷರಾಗಿ, ಊರಿನ ದೇವಸ್ಥಾನ, ದೈವಸ್ಥಾನಗಳಿಗೆ ಸಲಹೆಗಾರರಾಗಿ, ಎಲ್ಲರೊಂದಿಗೂ ಸದಾ ನಗುಮುಖ ದೊಂದಿಗೆ ಸ್ಪಂದಿಸುವ ಒಬ್ಬ ಅಜಾತಶತ್ರುವೆಂದು ಬಿಂಬಿತರಾದವರು. ಇವರು ಪ್ರಗತಿಪರ ಕೃಷಿಕರು, ನಾಟಕ ಯಕ್ಷಗಾನ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು.


ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನ ಸುದ್ದಿ ತಿಳಿದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಮ್ ಹಾಗೂ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು- ಸದಸ್ಯರುಗಳು, ಗಣ್ಯಾದಿ ಗಣ್ಯರುಗಳೊಂದಿಗೆ ಊರಿನ ಜನರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!