ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮಿತ್ತಬಾಗಿಲು :ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ
ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದೆ.
ಶ್ರೀ ದೇವರ ಬ್ರಹ್ಮ ಕುಂಭಾಭಿಷೇಕ ಹಾಗೂ ಪುನಃ ಪ್ರತಿಷ್ಠಾ ಕಾರ್ಯಕ್ರಮಗಳನ್ನು ವೈಭವದಿಂದ ನೆರವೇರಿಸಲು ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಅಕ್ಟೋಬರ್ 15 ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 2-30ಕ್ಕೆ ಸರಿಯಾಗಿ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಸಭಾಭವನದಲ್ಲಿ ಭಕ್ತಾದಿಗಳ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮ ಕಲಶ ಸಮಿತಿಯನ್ನು ರಚಿಸುವರೆ ಸಹಕರಿಸಿ ಶ್ರೀ ದುರ್ಗಾ ಮಾತೆಯ ಕೃಪೆಗೆ ಪಾತ್ರರಾಗುವಂತೆ
ಸಮಿತಿ ಅದ್ಧ್ಯಕ್ಷರಾದ ಡಾ.ಬಿ.ಕೆ. ಲೋಕೇಶ್ ರಾವ್ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ
ವಾಸುದೇವ ರಾವ್ ಕಕ್ಕೆನೇಜಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!