July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ದೆಗೆ ತರಭೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡೂರಿನ ಆನಂದ ಆಚಾರ್ಯ (38ವರ್ಷ) ಎಂಬಾತನು ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು, ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!