23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya
error: Content is protected !!