September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!