25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ ಸರ್ವೆನಂಬ್ರ 70/1B ರಲ್ಲಿ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣ ಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸು ನೀಡಿದ್ದಾರೆ.
ಈ ಹಿಂದೆ ಕೂಡಾ ಅತಿಕ್ರಮಣ ಮಾಡಿದ್ದ ಕಾರಣ ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆ ಮೌಖಿಕವಾಗಿ ತಿಳಿಸಿ ಅತಿಕ್ರಮಣವನ್ನು ನಿಲ್ಲಿಸಿತ್ತು. ಆದರೆ ಪುನಃ ಕಛೇರಿ ರಜಾ ದಿನದಲ್ಲಿ ಜೆ ಸಿ ಬಿ ಯಂತ್ರದ ಮೂಲಕ ಅತಿಕ್ರಮಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಅತಿಕ್ರಮಣಕಾರರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

Related posts

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya
error: Content is protected !!